Saturday, August 15, 2015

ವಿರಹಗಾನ

ವಿರಹಾ.....
ಶೀತಲ ಸಮರ
ಮಂಜುಗಟ್ಟಿದೆ ಮನಸು
ಬಿಸಿಯುಸಿರಲಿ ಬೆಸೆದು
ಕರಗಿಸಬೇಕು...

ಒಬ್ಬರಿಂದೊಬ್ಬರು
ವಿಮುಖರಾಗಿದ್ದರೂ
ಚಿತ್ತವೆಲ್ಲವೂ ತುಂಬಿದೆ
ಮನೋರಮೆಯ ಚಿತ್ರ...

ತೊರೆಯ ದಡಗಳ ಆಚೆ
ಸಂತ್ರಸ್ತ ಪ್ರೇಮದ ತುಣುಕುಗಳು
ತೆರೆ ಕರಗಿ ಒಂದಾಗಲು
ಬೇಕಿದೆ ನೀಳ ಬೆರಳುಗಳ ಸ್ಪರ್ಷ...

ಒಂದಿನಿತು ವಿರಹಾ
ಅದುವೇ ತರಹ ತರಹಾ
ನಿಟ್ಟುಸಿರಿನ ಬೇಗೆ
ಕರಗುತಿದೆ ಮಂಜಿನಾ ತೆರೆ.....

ಉಚ್ವಾಸ-ನಿಸ್ವಾಸ
ನಮ್ಮುಸಿರು ಪ್ರೀತಿಯೇ
ಮನದ ಮಾಲಿನ್ಯ ಕರಗಿ
ಮಾನಿನಿಯ ನೋಟದಲಿ ಲೀನವಾಗಬೇಕು...

No comments:

Post a Comment